LATEST NEWS
ಕೇರಳ ಸರ್ಕಾರಿ ಬಸ್ಗೆ ಲಾರಿ ಡಿಕ್ಕಿ 20 ಮಂದಿ ದುರ್ಮರಣ
ಕೇರಳ ಸರ್ಕಾರಿ ಬಸ್ಗೆ ಲಾರಿ ಡಿಕ್ಕಿ 20 ಮಂದಿ ದುರ್ಮರಣ
ತಮಿಳುನಾಡು ಫೆಬ್ರವರಿ 20:ಕೇರಳ ರಾಜ್ಯ ಸಾರಿಗೆ ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ದುರ್ಮರಣವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಅವಿನಾಶಿಯಲ್ಲಿ ನಡೆದಿದೆ.
ಕೇರಳ ರಾಜ್ಯಕ್ಕೆ ಸೇರಿದ ಸರ್ಕಾರಿ ವೋಲ್ವೋ ಬಸ್ ಬೆಂಗಳೂರಿನಿಂದ ತಿರುವನಂತಪುರಕ್ಕೆ ಹೊರಟಿತ್ತು. ಈ ವೇಳೆ ಕೊಯಮತ್ತೂರ್-ಸೇಲಂ ಹೆದ್ದಾರಿಯಲ್ಲಿ ಎದುರಿನಿಂದ ಬಂದಿರುವ ಟ್ರಕ್ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 20 ಮಂದಿ ಸಾವನ್ನಪ್ಪಿದ್ದಾರೆ.
ಬಸ್ ನಲ್ಲಿ ಒಟ್ಟು 48 ಮಂದಿ ಪ್ರಯಾಣಿಕರಿದ್ದರು. ಚಾಲಕ, ನಿರ್ವಾಹಕ ಸೇರಿ ಒಟ್ಟು 20 ಮಂದಿ ಸಾವನ್ನಪ್ಪಿದ್ದು, ಉಳಿದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 3.15ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ.
You must be logged in to post a comment Login