LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ 20ನೇ ಬಲಿ
ಮಂಗಳೂರು ಜುಲೈ 4: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾಕ್ಕೆ ಇಂದು ಮತ್ತೊಂದು ಬಲಿಯಾಗಿದ್ದು, ಸುಳ್ಯದ ವೃದ್ದೆಯೊಬ್ಬರು ಕೊರೊನಾಕ್ಕೆ ಇಂದು ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆಯೊಬ್ಬರು ಇಂದು ಕೊರೋನಾಕ್ಕೆ ಬಲಿಯಾಗಿದ್ದಾರೆ. ವಾರದ ಹಿಂದೆ ಅಸೌಖ್ಯದ ಹಿನ್ನೆಲೆ ಸುಳ್ಯದ ಆಸ್ಪತ್ರೆ ದಾಖಲಾಗಿದ್ದರು. ಎರಡು ದಿನಗಳ ಹಿಂದಷ್ಟೇ ಮಂಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಹೃದಯಾಘಾತದಿಂದ ವೃದ್ದೆ ಸಾವನಪ್ಪಿದ್ದರು, ಮೃತಪಟ್ಟ ಬಳಿಕ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು, ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
You must be logged in to post a comment Login