Connect with us

LATEST NEWS

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ಜಿಲ್ಲೆಯ 21 ಮಂದಿ ಈಗ ಐಸೋಲೇಷನ್ ವಾರ್ಡ್ ನಲ್ಲಿ

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ಜಿಲ್ಲೆಯ 21 ಮಂದಿ ಈಗ ಐಸೋಲೇಷನ್ ವಾರ್ಡ್ ನಲ್ಲಿ

ಮಂಗಳೂರು ಎಪ್ರಿಲ್ 1: ದೆಹಲಿ ನಿಝಾಮುದ್ದೀನ್ ನಲ್ಲಿ ನಡೆದ ತಬ್ಲೀಗ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ ಭಾಗಿಯಾಗಿದ್ದು ಎಲ್ಲರನ್ನೂ ಪತ್ತೆ ಹಚ್ಚಿ ಐಸೋಲೇಷನ್ ವಾರ್ಡ್ ನಲ್ಲಿಡಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.

ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲಿಗಿ ಜಮಾತ್ ಕೇಂದ್ರ ಕಚೇರಿಯಲ್ಲಿ ನಡೆದಿದ್ದ ಧಾರ್ಮಿಕ ಸಮಾವೇಶದಲ್ಲಿ ರಾಜ್ಯದಿಂದ ಸುಮಾರು 300 ಮಂದಿ ಭಾಗವಹಿಸಿದ್ದರು ಎಂದು ಆರೋಗ್ಯ ಸಚಿವ ರಾಮಲು ತಿಳಿಸಿದ್ದರು. ಅದರಲ್ಲಿ 21 ಮಂದಿ ದಕ್ಷಿಣಕನ್ನಡ ಜಿಲ್ಲೆಯಿಂದ ತೆರಳಿದ್ದರು ಎಂದು ಅಧಿಕೃತ ಮಾಹಿತಿ ಬಂದಿದೆ.

ಈಗಾಗಲೇ 21 ಮಂದಿಯನ್ನು ಸಂಪರ್ಕಿಸಲಾಗಿದ್ದು, ಎಲ್ಲರನ್ನೂ ಆಸ್ಪತ್ರೆಯ ಐಸೋಲೇಷನ್ ವಿಭಾಗ ದಾಖಲಿಸಲಾಗಿದ್ದು, ಎಲ್ಲರ ಮೇಲೂ ನಿಗಾ ಇಡಲಾಗಿದೆ. ಅಲ್ಲದೆ ಎಲ್ಲರ ಗಂಟಲಿನ ದ್ರವ ಪರೀಕ್ಷೆಗೆ ಆರೋಗ್ಯ ಇಲಾಖೆ ತಯಾರಿ ನಡೆಸಿದ್ದು. ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *