Connect with us

LATEST NEWS

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ

ಮಂಗಳೂರು ಮೇ 02: ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ಪಕ್ಷದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ.


ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಪೊಲೀಸ್ ಇಲಾಖೆ ವೈಫಲ್ಯ ಮೇಲ್ನೋಟಕ್ಕೆ ಕಂಡು ಬರ್ತಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ ಎಂದು ಹೇಳಿದರು. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಅವರ ಕುಟುಂಬದ ಜೊತೆ ಇದ್ದೇವೆ. ಕುಟುಂಬದ ಆಧಾರ ಸ್ತಂಬ ಕಳಚಿ ಬಿದ್ದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.


ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುವ ತೀರ್ಮಾನ ಮಾಡಿದ್ದೇವೆ. ಮುಖ್ಯಮಂತ್ರಿ, ಗೃಹಸಚಿವರು ಘಟನೆಯ ಗಂಭೀರತೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರದಿಂದ ಪರಿಹಾರ ನೀಡಬೇಕು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕು ಎಂದು ಆಗ್ರಹಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *