Connect with us

LATEST NEWS

ಬೆಳ್ಳಂಬೆಳಿಗ್ಗೆ ಮೂರು ಬಲಿ ತೆಗೆದುಕೊಂಡ ಕೊರೊನಾ

ಮಂಗಳೂರು ಜುಲೈ 8: ದಕ್ಷಿಣಕನ್ನಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಕೊರಾನಾ ಮೂರು ಬಲಿ ತೆಗೆದುಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಉಳ್ಳಾಲ ಮೂಲದ 62 ವರ್ಷದ ವೃದ್ದೆ, ಪುತ್ತೂರು ಮೂಲದ 32 ವರ್ಷದ ಮಹಿಳೆ ಹಾಗೂ ಭಟ್ಕಳ ಮೂಲದ 60 ವರ್ಷ ವೃದ್ದ ಕೊರೊನಾದಿಂದ ಸಾವನಪ್ಪಿದ್ದಾರೆ.


ಜೂನ್​ 22ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಉಳ್ಳಾಲದ 62 ವರ್ಷದ ಮಹಿಳೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಿಗೆ ಹೈಪರ್ ಟೆನ್ಷನ್​, ಡಯಾಬಿಟಿಸ್, ಲಿವರ್ ಸಮಸ್ಯೆ, ಹೃದಯ ಸಮಸ್ಯೆ ಇತ್ತು.ಹಾಗೆಯೇ ಪುತ್ತೂರಿನ 32 ವರ್ಷದ ಬಾಣಂತಿ ಮಹಿಳೆ ಮೃತಪಟ್ಟಿದ್ದು, ಇವರು ಇತ್ತೀಚೆಗಷ್ಟೇ ಮಗುವಿಗೆ ಜನ್ಮ ನೀಡಿದ್ದು ಕಿಡ್ನಿ ಸಂಬಂದ ಕಾಯಿಲೆಯಿಂದ ಬಳಲುತ್ತಿದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಐಸಿಯುವಿನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ 60 ವರ್ಷದ ವ್ಯಕ್ತಿ ಸಾವನ್ಬಪ್ಪಿದ್ದಾರೆ. ಹೃದಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಒಟ್ಟಾರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *