Connect with us

    UDUPI

    ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 3 ಬಲಿ ಪಡೆದ ಕೊರೊನಾ..ಸಾವಿನ ಸಂಖ್ಯೆ 8 ಕ್ಕೆ ಏರಿಕೆ

    ಉಡುಪಿ ಜುಲೈ 16: ದಕ್ಷಿಣಕನ್ನಡ ಜಿಲ್ಲೆ ನಂತರ ಇದೀಗ ಉಡುಪಿ ಜಿಲ್ಲೆಯಲ್ಲೂ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆ ಹಾದಿಯಲ್ಲಿದ್ದು ಇಂದು ಒಂದೇ ದಿನ 3 ಮಂದಿ ಕೊರೊನಾದಿಂದಾಗಿ ಸಾವನಪ್ಪಿದ್ದಾರೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.


    ಕೊರೊನಾ ಉಡುಪಿ ಜಿಲ್ಲೆಯಲ್ಲೂ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ಇಂದು ಮೂವರನ್ನು ಬಲಿ ಪಡೆದಿದೆ, ಉಡುಪಿ ಮತ್ತು ಕುಂದಾಪುರಗಳಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಸೋಂಕಿತ ಉಡುಪಿಯಲ್ಲಿ ಸಾವನಪ್ಪಿದ್ದು, ಕುಂದಾಪುರದ ಮರವಂತೆಯ 58 ವರ್ಷ ಪ್ರಾಯದ ವ್ಯಕ್ತಿ ಸಾವು, ಈ ವ್ಯಕ್ತಿ ತೀವ್ರ ಅಸ್ತಮಾದಿಂದ ಬಳಲುತ್ತಿದ್ದು ಬುಧವಾರ ಸಂಜೆ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಅವರು ಮೃತಪಟ್ಟಿದ್ದರು. ನಂತರ ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಕಂಡು ಬಂದಿತ್ತು.


    ಅಂಕೋಲದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply