UDUPI
ಮಸೀದಿ ಆಡಳಿತ ಮಂಡಳಿ ಜೊತೆ ಮನಸ್ತಾಪ 32 ವಿಧ್ಯಾರ್ಥಿಗಳೊಂದಿಗೆ ಧರ್ಮಗುರು ನಾಪತ್ತೆ
ಮಸೀದಿ ಆಡಳಿತ ಮಂಡಳಿ ಜೊತೆ ಮನಸ್ತಾಪ 32 ವಿಧ್ಯಾರ್ಥಿಗಳೊಂದಿಗೆ ಧರ್ಮಗುರು ನಾಪತ್ತೆ
ಉಡುಪಿ ನವೆಂಬರ್ 3: ಮಸೀದಿ ಆಡಳಿತ ಮಂಡಳಿ ಜೊತೆ ಮನಸ್ತಾಪ ಹೊಂದಿದ್ದ ಕಾರಣಕ್ಕೆ ಮಸೀದಿ ಮೌಲ್ವಿಯೊಬ್ಬರು 32 ಮಂದಿ ವಿಧ್ಯಾರ್ಥಿಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದೆ. ಕಳೆದ ಐದು ವರುಷಗಳಿಂದ ಕಾರ್ಕಳದ ಮದೀನಾ ಮಸೀದಿಯಲ್ಲಿ ಸಹಾಯಕ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ತಯ್ಯಬ್. ಈತ ಬಿಹಾರ್ ಮೂಲದವನಾಗಿದ್ದಾನೆ ಎಂದು ತಿಳಿದು ಬಂದಿದೆ.
ನಾಪತ್ತೆಯಾಗಿರುವ ವಿಧ್ಯಾರ್ಥಿಗಳು ಬಿಹಾರ ಮೂಲದಿಂದ ಧಾರ್ಮಿಕ ಶಿಕ್ಷಣ ಪಡೆಯಲೆಂದೇ ಕಾರ್ಕಳದ ಮಸೀದಿಗೆ ಆಗಮಿಸಿದ್ದರು ಎಂದ ಹೇಳಲಾಗಿದೆ. ಆದರೆ 32 ವಿದ್ಯಾರ್ಥಿಗಳನ್ನು ಮೌಲ್ವಿ ತಯ್ಯಬ್ ಎಲ್ಲಿಗೆ ಕರೆದುಕೊಂಡು ಹೋಗಿದ್ದಾನೆ ಅನ್ನೋದು ತಿಳಿದುಬಂದಿರಲಿಲ್ಲ.
ಕಳೆದ ತಡರಾತ್ರಿ ಈ ಘಟನೆ ನಡೆದಿದ್ದರು ಮಸೀದಿಯ ಆಡಳಿತ ಮಂಡಳಿ ಈ ವಿಚಾರ ಪೊಲೀಸರ ಗಮನಕ್ಕೆ ತಂದಿರಲಿಲ್ಲ.
ಕಳೆದ ತಡರಾತ್ರಿ ಈ ಘಟನೆ ನಡೆದಿದ್ದರು ಮಸೀದಿಯ ಆಡಳಿತ ಮಂಡಳಿ ಈ ವಿಚಾರ ಪೊಲೀಸರ ಗಮನಕ್ಕೆ ತಂದಿರಲಿಲ್ಲ. ಕಳೆದ ತಡರಾತ್ರಿ ಟೆಂಪೋ ಟ್ರಾವೆಲರ್ ಮೂಲಕ ಕುಂದಾಪುರ ರೈಲ್ವೇ ಠಾಣೆಗೆ ತೆರಳಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿತ್ತು. ಬಳಿಕ ಆತ 32 ಮಕ್ಕಳನ್ನು ಕರೆದುಕೊಂಡು ಬಿಹಾರಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿತ್ತು.
ಮೌಲ್ವಿ ಹಾಗು ಮಕ್ಕಳ ನಾಪತ್ತೆ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿರುವ ಕಾರಣ ಎಚ್ಚೆತ್ತ ಮಸೀದಿ ಆಡಳಿತ ಮಂಡಳಿ ಇಂದು ಸಂಜೆ ಕಾರ್ಕಳ ಪೊಲೀಸ್ ಠಾಣೆ ಗೆ ತೆರಳಿ ಮೌಲ್ವಿ ತಯ್ಯಬ್ ವಿರುದ್ದ ಅಪಹರಣ ಪ್ರಕರಣ ದಾಖಲಿಸಿದೆ.
Facebook Comments
You may like
ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಸಾಸ್ತಾನ ಟೋಲ್ ವಿನಾಯಿತಿ ನೀಡಲು ಒಪ್ಪದ ನವಯುಗ ಸಂಸ್ಥೆ – ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
You must be logged in to post a comment Login