Connect with us

    KARNATAKA

    ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ!

    ರಾಣೆಬೆನ್ನೂರು, ಮಾರ್ಚ್ 06: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ.

    ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ರತಿ ಪಾತ್ರಧಾರಿಯಾಗಿ ಕುಮಾರ ಹಡಪದ ಹಾಗೂ ಗದಿಗೆಪ್ಪ ದೊಡ್ಡನವರ ಮನ್ಮಥನ ಪಾತ್ರ ಮಾಡುತ್ತಾ ಬಂದಿದ್ದು, ಈ ಬಾರಿಯೂ ಇವರೇ ಇರಲಿದ್ದಾರೆ. ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply