Connect with us

BELTHANGADI

ಬಟ್ಟೆ ನುಂಗಿದ 4 ಅಡಿ ಉದ್ದದ ನಾಗರಹಾವು!

ಬೆಳ್ತಂಗಡಿ, ಜೂನ್ 27: ಬಟ್ಟೆಯನ್ನು ನುಂಗಿದ್ದ ನಾಗರಹಾವೊಂದನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಶಾಲೆತಡ್ಕ ನಿವಾಸಿ ಅಶೋಕ್‌ ಪೂಜಾರಿ ಎಂಬವರ ಮನೆಯ ಕೊಟ್ಟಿಗೆಯ ಬದಿಯಲ್ಲಿ ಸುಮಾರು 4 ಅಡಿ ಉದ್ದದ ನಾಗರ ಹಾವು ಬಟ್ಟೆಯೊಂದನ್ನು ನುಂಗಿತ್ತು.

ಇದನ್ನು ಗಮನಿಸಿದ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಇವರಿಗೆ ಮಾಹಿತಿ ನೀಡಿದ್ದು ತಕ್ಷಣ ಸ್ಥಳಕ್ಕೆ ಬಂದು ನಾಗರಹಾವನ್ನು ಹಿಡಿದು ನುಂಗಿದ್ದ ಬಟ್ಟೆಯನ್ನು ಹೊರತೆಗೆದು ನಂತರ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ‌.

Share Information
Continue Reading
Advertisement
Click to comment

Leave a Reply

Your email address will not be published. Required fields are marked *