LATEST NEWS
ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟು ತಪ್ಪಿ ರಾತ್ರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ
ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟು ತಪ್ಪಿ ರಾತ್ರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಸಿಲುಕಿದ್ದ ನಾಲ್ವರ ರಕ್ಷಣೆ
ಉಡುಪಿ ನವೆಂಬರ್ 24: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟು ತಪ್ಪಿದ ಪರಿಣಾಮ ಕೇರಳ ರಾಜ್ಯದ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಮಲ್ಪೆ ಸಮುದ್ರ ಮಧ್ಯೆ ಇರುವ ಸೈಂಟ್ ಮೇರಿಸ್ ದ್ವೀಪದಲ್ಲಿ ಇಡೀ ರಾತ್ರಿ ಕಳೆದ ಘಟನೆ ನಡೆದಿದೆ.
ಕೇರಳದ ರಾಜ್ಯದ ನಿವಾಸಿಗಳಾದ ಜಸ್ಟಿನ್(34), ಶೀಜಾ(33), ಜೋಶ್(28) ಹಾಗೂ ಹರೀಶ್(17) ಅವರನ್ನು ಸೈಂಟ್ ಮೇರಿಸ್ ದ್ವೀಪದಿಂದ ರಕ್ಷಿಸಿ ತೀರಕ್ಕೆ ಕರೆತರಲಾಗಿದೆ.
ಉಡುಪಿ ಪ್ರವಾಸಕ್ಕೆ ಆಗಮಿಸಿದ ನಾಲ್ವರ ತಂಡ ನವೆಂಬರ್ 23 ರಂದು ಮಧ್ಯಾಹ್ನ ಮಲ್ಪೆ ಅಭಿವೃದ್ಧಿ ಸಮಿತಿಯ ಬೋಟಿನ ಮೂಲಕ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಿದ್ದರೆನ್ನಲಾಗಿದೆ. ಅಲ್ಲಿ ತಿರುಗಾಡಿದ ನಂತರ ಇವರು ಸೈಂಟ್ ಮೇರಿಸ್ ದ್ವೀಪದ ಹತ್ತಿರದಲ್ಲೇ ಇರುವ ಇನ್ನೊಂದು ಸಣ್ಣ ದ್ವೀಪಕ್ಕೆ ತೆರಳಿದ್ದರು. ಆದರೆ ಸಂಜೆಯ ವೇಳೆ ಸಮುದ್ರದ ನೀರಿನ ಮಟ್ಟ ಏರಿಕೆಯಾದ ಪರಿಣಾಮ ದ್ವೀಪವನ್ನು ದಾಟಲು ಸಾಧ್ಯವಾಗದೆ ಇವರೆಲ್ಲ ಅಲ್ಲೇ ಉಳಿದುಕೊಂಡಿದ್ದರು.
ಈ ಮಧ್ಯೆ ಪ್ರವಾಸಿಗರನ್ನು ವಾಪಸ್ ಕರೆದೊಯ್ಯುವ ಕೊನೆಯ ಬೋಟ್ ಸಂಜೆ 6:45ರ ಸುಮಾರಿಗೆ ದ್ವೀಪಕ್ಕೆ ಬಂದಿದ್ದು, ದ್ವೀಪದಲ್ಲಿ ಇದ್ದ ಎಲ್ಲ ಪ್ರವಾಸಿಗರನ್ನು ಕರೆದುಕೊಂಡು ತೀರಕ್ಕೆ ಬಂದಿತ್ತು. ಆದರೆ ಕೇರಳದ ಈ ನಾಲ್ವರು ಬೋಟಿನವರಿಗೆ ಕಾಣದೆ ಇದ್ದುದರಿಂದ ಬೋಟು ವಾಪಸ್ ತೀರಕ್ಕೆ ಬಂದಿತು.
ವಿಚಾರಣೆ ನಡೆಸಿದ ಮಲ್ಪೆ ಪೊಲೀಸರು ಇವರನ್ನು ಸುರಕ್ಷಿತವಾಗಿ ಕೇರಳ ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ಜಸ್ಟಿನ್ ಮತ್ತು ಶೀಜಾ ಕೊಚ್ಚಿನ್ನಲ್ಲಿ ಸಣ್ಣ ಹೊಟೇಲ್ ನಡೆಸಿಕೊಂಡು ಬರುತ್ತಿದ್ದು, ಜೋಶ್ ಇವರಲ್ಲಿ ಕೆಲಸ ಮಾಡಿಕೊಂಡಿದ್ದನು ಎನ್ನಲಾಗಿದೆ. ಇವರ ಪೈಕಿ ಹರೀಶ್ 17 ವರ್ಷ ಕೆಳಗಿನ ಕೊಚ್ಚಿನ್ ಫುಟ್ಬಾಲ್ ಅಕಾಡಮಿಯ ಗೋಲ್ ಕೀಪರ್ ಆಗಿದ್ದಾನೆ ಎಂದು ವಿಚಾರಣೆ ಸಂದರ್ಭ ತಿಳಿದುಬಂದಿದೆ.
ಆದರೆ ಕೇರಳದ ಈ ನಾಲ್ವರು ಬೋಟಿನವರಿಗೆ ಕಾಣದೆ ಇದ್ದುದರಿಂದ ಬೋಟು ವಾಪಸ್ ತೀರಕ್ಕೆ ಬಂದಿತು. ನೀರಿನ ಮಟ್ಟ ಇಳಿದ ನಂತರ ಇವರು ಬೋಟು ಆಗಮಿಸುವ ಸ್ಥಳಕ್ಕೆ ಬಂದು ನೋಡಿದಾಗ ಬೋಟು ತೆರಳಿರುವುದು ತಿಳಿಯಿತು. ಈ ಸಂದರ್ಭದಲ್ಲಿ ಯಾರನ್ನು ಕೂಡ ಸಂರ್ಪಕಿಸಲು ಸಾಧ್ಯವಾಗದೆ ಈ ನಾಲ್ವರು ಇಡೀ ರಾತ್ರಿ ಸೈಂಟ್ ಮೇರಿಸ್ನಲ್ಲೇ ಕಳೆದರು ಎಂದು ಮಲ್ಪೆ ಪೊಲೀಸರು ತಿಳಿಸಿದರು.
ಇಂದು ಬೆಳಗ್ಗೆ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಿದ ಬೋಟಿನವರು ಇವರನ್ನು ಗಮನಿಸಿ ತೀರಕ್ಕೆ ಕರೆದುಕೊಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದರು. ಸೈಂಟ್ ಮೇರಿಸ್ ದ್ವೀಪದಲ್ಲಿ ರಾತ್ರಿ ಉಳಿದುಕೊಳ್ಳುವುದನ್ನು ನಿಷೇಧಿರುವುದರಿಂದ ಪೊಲೀಸರು ಇವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಇವರಲ್ಲಿರುವ ಬೋಟಿನ ಟಿಕೆಟ್, ರೈಲ್ವೆ ಟಿಕೆಟ್, ಗುರುತಿನ ಚೀಟಿಗಳನ್ನು ಪರಿಶೀಲಿಸಿದರು. ನಂತರ ಇವರನ್ನು ಸುರಕ್ಷಿತವಾಗಿ ಕೇರಳ ರಾಜ್ಯಕ್ಕೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
You must be logged in to post a comment Login