LATEST NEWS
ಮಂಗಳೂರು – ತನ್ನ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸಿಐಎಸ್ಎಫ್ ಸಿಬ್ಬಂದಿ
ಮಂಗಳೂರು ಅಕ್ಟೋಬರ್ 22: ಪಣಂಬೂರು ಎನ್ಎಂಪಿಎ ಬಂದರಿನಲ್ಲಿ ಭದ್ರತೆ ನೋಡಿಕೊಳ್ಳುವ ಸಿಐಎಸ್ಎಫ್ ವಿಭಾಗದಲ್ಲಿ ಪಿಎಸ್ಐ ಆಗಿದ್ದ ಜಾಕೀರ್ ಹುಸೇನ್ (58) ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಾಕೀರ್ ಹುಸೇನ್ ಮೂಲತಃ ರಾಯಚೂರು ಜಿಲ್ಲೆಯ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಎನ್ಎಂಪಿಟಿ ಮೈನ್ ಗೇಟ್ ನಲ್ಲಿ ನೈಟ್ ಶಿಫ್ಟ್ ನಲ್ಲಿ ನಿಯೋಜಿತರಾಗಿದ್ದರು. ಇಂದು ಬೆಳಗ್ಗೆ 6.30ಕ್ಕೆ ತನ್ನ ನೈಟ್ ಶಿಫ್ಟ್ ಮುಗಿಸಿ ಬೇರೊಬ್ಬರಿಗೆ ಕೆಲಸ ವಹಿಸಿ ವಾಶ್ ರೂಮ್ ತೆರಳಿದ್ದರು. ಅಲ್ಲಿ ಇರುವಾಗಲೇ ತನ್ನ ಸರ್ವಿಸ್ ರಿವಾಲ್ವರ್ ನಲ್ಲಿ ತಲೆಗೆ ಗುರಿ ಇರಿಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login