LATEST NEWS
ಸೇತುವೆಯಿಂದ ಕೆಳಗೆ ಬಿದ್ದ ಕಾರು – ಶಾಸಕರ ಮಗ ಸೇರಿದಂತೆ 7 ಮಂದಿ ಮೆಡಿಕಲ್ ವಿಧ್ಯಾರ್ಥಿಗಳ ಸಾವು
ಮುಂಬೈ ಜನವರಿ 25: ಕಾರೊಂದು ಸೇತುವೆ ಮೇಲಿಂದ 50 ಅಡಿ ಕೆಳಗೆ ಬಿದ್ದ ಪರಿಣಾಮ ಶಾಸಕನ ಮಗ ಸೇರಿದಂತೆ 7 ಮಂದಿ ವೈದ್ಯಕೀಯ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಆವಿಷ್ಕರ್ ಕೂಡ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಮೃತರನ್ನು ನೀರಜ್ ಚೌಹಾಣ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಎಂದು ಗುರುತಿಸಲಾಗಿದೆ.
ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಝೈಲೋ ಕಾರು ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ. ಬಳಿಕ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
You must be logged in to post a comment Login