Connect with us

    KARNATAKA

    ಮಾನಸಿಕ ಖಿನ್ನತೆಗೆ 7ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಶರಣು

    ಕೊಡಗು ಮಾರ್ಚ್ 19: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ.


    ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಗಿದ್ದಾಳೆ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈಕೆ ಜಿತೇಂದ್ರ ಅಕ್ಷತ ದಂಪತಿಯ ಪುತ್ರಿ ಆಗಿದ್ದಳು. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ 7 ತರಗತಿ ಓದುತ್ತಿದ್ದಳು. ಆದರೆ, ಪರೀಕ್ಷೆ ಆರಂಭವಾದ ಒಂದು ವಾರದಿಂದಲೂ ವೈಷ್ಣವಿ ತೀವರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply