Connect with us

LATEST NEWS

8 ವರ್ಷದ ಬಾಲಕಿಯ ಕೊಲೆಗೈದು ಚರಂಡಿಗೆಸೆದ ಪಾಪಿ….!!

ಮಂಗಳೂರು ನವೆಂಬರ್ 21: ಎಂಟು ವರ್ಷದ ಹೆಣ್ಣು ಮಗುವನನ್ನು ಕೊಲೆಗೈದು ಚರಂಡಿಗೆ ಎಸೆದ ಅಮಾನವೀಯ ಘಟನೆ ಮಂಗಳೂರಿನ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನಡೆದಿದೆ.


ರಾಜ್ ಟೈಲ್ಸ್ ಎಂಬ ಕಾರ್ಖಾನೆ ಬಳಿ ಈ ಘಟನೆ ನಡೆದಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಕಾರ್ಮಿಕರ ಮಗಳು ಸಂಜೆ ನಾಲ್ಕು ಗಂಟೆಯಿಂದ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಬಾಲಕಿಗಾಗಿ ಕಾರ್ಖಾನೆ ಸೇರಿದಂತೆ ಹಲವೆಡೆ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಖಾನೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರು ಅದಗಲೇ ಬಾಲಕಿ ಸಾವನ್ನಪ್ಪಿದ್ದಳು.

ಇನ್ನು ಬಾಲಕಿಯನ್ನು ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದವರೇ ಹತ್ಯೆ ಮಾಡಿರುವ ಶಂಕೆಯನ್ನು ಆಕೆಯ ಪೋಷಕರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಈಗಾಗಲೇ ಹಲವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯಾ ಎನ್ನುವ ಬಗ್ಗೆ ತನಿಖೆಯಿಂದ ತಿಳಿದು ಬರಬೇಕಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *