LATEST NEWS
ಜೋಡುಪಾಳ ದುರಂತ 828 ಮಂದಿ ಸ್ಥಳಾಂತರ -ಆರ್.ವಿ ದೇಶಪಾಂಡೆ
ಜೋಡುಪಾಳ ದುರಂತ 828 ಮಂದಿ ಸ್ಥಳಾಂತರ -ಆರ್.ವಿ ದೇಶಪಾಂಡೆ
ಮಂಗಳೂರು ಅಗಸ್ಟ್ 19: ಕೊಡಗಿನ ಸಂಪಾಜೆ ಘಾಟ್ ನ ಜೋಡುಪಾಳ ದುರಂತಕ್ಕೆ ಸಂಬಂಧಿಸಿದಂತೆ ಒಟ್ಟು 828 ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು, ಒಂದೇ ಕುಟುಂಬದ ನಾಪತ್ತೆಯಾಗಿದ್ದ ನಾಲ್ಕು ಮಂದಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮಾಹಿತಿ ನೀಡಿದರು.
ಅವಘಡದಿಂದ ಸಾವಿಗೀಡಾದ ಇಬ್ಬರಿಗೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ಕನ್ನು ವಿತರಿಸಲಾಗಿದೆ. ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದ ಅವರು ಜೋಡುಪಾಳ ಪ್ರದೇಶದಲ್ಲಿ ಸೇನಾ ಪಡೆಗಳು ಸೇರಿದಂತೆ ಎಲ್ಲಾ ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಈಗಾಗಲೇ ಏಳು ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದೆ.
ಸಂತ್ರಸ್ತರಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಸುಮಾರು 1326 ಮನೆಗಳಿಗೆ ಹಾನಿಯಾಗಿದ್ದು, ಮನೆಗಳ ಹಾನಿಗೆ ಸುಮಾರು 1.46 ಕೋಟಿ ರೂಪಾಯಿ ಪರಿಹಾರವನ್ನು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
You must be logged in to post a comment Login