Connect with us

    LATEST NEWS

    ನೀರಿನ ಕೊಡ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಹೊಡೆತ ತಿಂದ ಬಾಲಕ ಸಾವು..!!

    ರಾಜಸ್ಥಾನ ಅಗಸ್ಟ್ 14:ಶಾಲೆಯಲ್ಲಿರುವ ನೀರಿನ ಕೊಡವನ್ನು ಮುಟ್ಟಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ದಲಿತ ಬಾಲಕ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ.


    ಸುರಾನಾ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿ ಇಂದ್ರ ಮೇಘವಾಲ್ ಮೃತ ಬಾಲಕ, ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಶಿಕ್ಷಕ ಚೈಲ್ ಸಿಂಗ್ (40) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೀರಿನ ಕೊಡ ಮುಟ್ಟಿದ್ದಕ್ಕಾಗಿ ಜುಲೈ 20 ರಂದು ಸುರಾನಾ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿ ಇಂದ್ರ ಮೇಘವಾಲ್ ಎಂಬಾತನ ಮೇಲೆ ಚೈಲ್‌ ಸಿಂಗ್‌ ತೀವ್ರವಾಗಿ ಹಲ್ಲೆ ಮಾಡಿದ್ದರು. ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಮೇಘವಾಲ್‌ ಶನಿವಾರ ಮೃತಪಟ್ಟಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply