Connect with us

KARNATAKA

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆ!

ಶಿವಮೊಗ್ಗ, ಸೆಪ್ಟೆಂಬರ್ 10: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಚ್.ಕೆ. ಜಂಕ್ಷನ್ ಬಳಿ ಭದ್ರಾ ನಾಲೆಯಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ.

17 ವರ್ಷದ ಯಶವಂತ್ ಮೃತಪಟ್ಟ ಬಾಲಕ. ಹುಣಸೆಕಟ್ಟೆ ಜಂಕ್ಷನ್ ಗ್ರಾಮದ ಇಂದಿರಾನಗರ ನಿವಾಸಿಯಾಗಿರುವ ಯಶವಂತ್ ಸೆಪ್ಟೆಂಬರ್ 3ರಂದು ಕಾಲೇಜಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದು, ವಾಪಸ್ ಬಂದಿರಲಿಲ್ಲ.

ಮಾರನೇ ದಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಭದ್ರಾ ನದಿಯಲ್ಲಿ ಕೊಳೆತ ಸ್ಸ್ಥಿತಿಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *