Connect with us

LATEST NEWS

ಪಾದಾಚಾರಿಗೆ ಡಿಕ್ಕಿ ಹೊಡೆದ ಬಸ್ಸು ; ಛಿದ್ರ ಛದ್ರವಾಗಿ ಬಿದ್ದ ಮೃತದೇಹ

ಉಡುಪಿ, ಡಿಸೆಂಬರ್ 01: ಜಿಲ್ಲೆಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ಪಾದಾಚಾರಿ ದೇಹ ಛಿದ್ರ ಛದ್ರವಾದ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದಿದ್ದು, ಕುಂದಾಪುರದಿಂದ ಉಡುಪಿಗೆ ಕಡೆಗೆ ಸಂಚರಿಸುತ್ತಿದ್ದ ಬಸ್ ಪಾದಾಚಾರಿ ಇಂದು ಶೇಖರ್ ಎಂಬವರಿಗೆ ಡಿಕ್ಕಿ ಹೊಡೆದಿದ್ದು ಇಂದು ಶೇಖರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಢಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲೆಲ್ಲಾ ಛಿದ್ರ ವಾಗಿ ದೇಹದ ಭಾಗಗಳು ಬಿದ್ದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ದಾರಿದೀಪ ಇಲ್ಲದೆ ಈ ಅಪಘಾತ ನಡೆದಿದೆ, ಈ ಭಾಗದ ಹೆದ್ದಾರಿಯಲ್ಲಿ ದಾರಿ ದೀಪ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *