Connect with us

    DAKSHINA KANNADA

    ಬಲೂನ್ ಕಟ್ಟಿಕೊಂಡು ಸೇತುವೆ ಮೇಲಿಂದ ಕುಮಾರಧಾರ ನದಿಗೆ ಹಾರಿದ ಉದ್ಯಮಿ

    ಕಡಬ, ಮೇ 26: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

    ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ ಎನ್ನಲಾಗಿದೆ.ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ.

    ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply