Connect with us

LATEST NEWS

ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ ಹೇಳಿಕೆ: ಎಂ. ಪಿ. ಮೊಯಿದಿನಬ್ಬ

ಉಡುಪಿ, ಮೇ 21: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯವರ ‌ಹೇಳಿಕೆ ಬೇಜವಾಬ್ದಾರಿ ತನದ್ದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ ಹೇಳಿಕೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲಗೊಂಡಿರುವ ಸಂಸದರ ಸ್ವಪಕ್ಷದ ಸರಕಾರದ ವೈಫಲ್ಯ ತೆಯನ್ನು ಮುಚ್ಚಿ ಹಾಕಲು ಈ ಹೇಳಿಕೆ ನೀಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಜನರ ಈ ಸಂಕಷ್ಟ ದ ಸಮಯದಲ್ಲಿ ಒಬ್ಬ ಜವಾಬ್ದಾರಿ ಯುತ ಸಂಸತ್ ಸದಸ್ಯರು ಜನರಲ್ಲಿ ಜಾಗ್ರತಿ ಮೂಡಿಸುವ ಹಾಗೂ ಜನರ ಮಧ್ಯದಲ್ಲೇ ಇದ್ದು ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಿ ಸಂಸದರ ಸ್ಥಾನದ ಗೌರವವನ್ನು ಕಾಪಾಡಬೇಕೆಂದು ಅವರು ಆಗ್ರಹಿಸಿ ದರಲ್ಲದೆ ಕೂಡಲೇ ಕ್ರೈಸ್ತ ಸಮುದಾಯದ ಕ್ಷಮೆ ಯಾಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *