Connect with us

    DAKSHINA KANNADA

    ಸುಳ್ಯ: ಮಳೆ ಆರ್ಭಟಕ್ಕೆ ಗೃಹ ಪ್ರವೇಶಕ್ಕೆ ಸಿದ್ದಗೊಂಡ ಮನೆ ನೆಲಸಮ

    ಸುಳ್ಯ, ಜುಲೈ 13 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಎಂಬಲ್ಲಿ ಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ ಆಗಿರುವ ಘಟನೆ ನಡೆದಿದೆ.

    ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಬಿಟ್ಟಿತ್ತು. ಬಿರುಕು ಬಿಟ್ಟಿರುವ ಗೋಡೆ ರಿಪೇರಿ ಕೆಲಸ ಮಾಡಲಾಗಿತ್ತು. ಜುಲೈ.18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲ ತಯಾರಿ ನಡೆದಿತ್ತು.ಆದರೆ ಅಷ್ಟರಲ್ಲೇ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ.

    ತೇಜ್ ಕುಮಾರ್ ಮತ್ತು ತಾರಾಮತಿ ದಂಪತಿಯ ಮನೆ ಇದಾಗಿದ್ದು ಪ್ರಜ್ವಲ್ ಮತ್ತು ಉಜ್ವಲ್ ಎಂಬ ಸಹೋದರರು ಮನೆಯಲ್ಲಿದ್ದರು. ಹಾಲ್​ನಲ್ಲಿ‌ ಮಲಗಿ 6.30 ಕ್ಕೆ ಮನೆಯಿಂದ ಹೊರಬಂದಿದ್ದರು.

    ಈ ವೇಳೆ ಗುಡ್ಡ ಕುಸಿದು 3 ಬೆಡ್ ರೂಂ ತುಂಬ ಮಣ್ಣು ಆವರಿಸಿಕೊಂಡಿದೆ. ಇನ್ನು ಗುಡ್ಡ ಕುಸಿದ ಹಿನ್ನೆಲೆ ಮನೆ ಬಳಿಯಿದ್ದ 3 ಬೈಕ್​ಗಳು ಮಣ್ಣಲ್ಲಿ ಸಿಲುಕಿ ಹಾನಿಯಾಗಿವೆ. ಮನೆಯಲ್ಲಿದ್ದವರ ಹೊರ ಬಂದಿರೋದ್ರಿಂದ ದುರಂತವೊಂದು ತಪ್ಪಿದೆ.

    Share Information
    Advertisement
    Click to comment

    You must be logged in to post a comment Login

    Leave a Reply