Connect with us

    LATEST NEWS

    ಬಾವಿಗೆ ಬಿದ್ದ ಚಿರತೆ- ಓಡಿಸಲು ಬೆಂಕಿ ಹಾಕಿ ಬೆದರಿಕೆ..!

    ಉಡುಪಿ, ಜೂನ್ 10: ಬಾವಿಗೆ ಬಿದ್ದ ಚಿರತೆಯೊಂದು ಏಣಿ ಇಟ್ಟರೂ, ಮೇಲೆ‌ ಬಾರದೇ ಇದ್ದಾಗ ಬೆಂಕಿಯಿಂದ ಬೆದರಿಸಿ ಚಿರತೆಯನ್ನು ಓಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೆಂಜೂರು ಎಂಬಲ್ಲಿ ನಡೆದಿದೆ.

    ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಚಿರತೆ ಬ್ರಹ್ಮಾವರದ ಕೆಂಜೂರಿನ ಮನೆಯೊಂದರ ಬಾವಿಗೆ ಬಿದ್ದಿತ್ತು.ಕೂಡಲೇ ಮನೆಯವರು ಅರಣ್ಯ ಇಲಾಖೆಗೆ ತಿಳಿಸಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬಂದಿ ದೊಡ್ಡ ಏಣಿಯೊಂದನ್ನು ಇಟ್ಟು ಚಿರತೆ ಮೇಲೆ ಬರ ಬಹುದು ಎಂದು ತುಂಬಾ ಹೊತ್ತು ಕಾದು ನೋಡಿದರು.

    ಆದರೆ ಭಯಗೊಂಡ ಚಿರತೆ ಬಾವಿಯಿಂದ ಮೇಲಕ್ಕೆ ಬಾರದೇ ಇದ್ದಾಗ, ಕೊನೆಯ ಉಪಾಯ ಎಂಬಂತೆ ಅರಣ್ಯ ಇಲಾಖೆಯ ಸಿಬಂದಿ, ದೊಡ್ಡ ಕೋಲೊಂದಕ್ಕೆ ಬಟ್ಟೆ ಸುತ್ತಿ ಬೆಂಕಿ ಕೊಟ್ಟು ಅದನ್ನು ಬಾವಿಗೆ ಇಳಿಸಿದರು. ಆಗ ಚಿರತೆ ಬೆಂಕಿಯನ್ನು ಕಂಡು ಭಯದಿಂದ ಏಣಿ ಏರಿ ಬಾವಿಯಿಂದ ಮೇಲಕ್ಕೆ ಬಂದು ಓಡಿ ತಪ್ಪಿಸಿಕೊಂಡಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply