Connect with us

KARNATAKA

ಶಿವಮೊಗ್ಗ: ಆಸ್ಪತ್ರೆಯ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..!!

ಶಿವಮೊಗ್ಗ : ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್ (3 ವರ್ಷ) ಆಸ್ಪತ್ರೆಯ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾಗಿದೆ.

ತೆರೆದ ನೆಲದ ತೊಟ್ಟಿಯಲ್ಲಿ ಮಗು ಬಿದ್ದು ಸಾವನ್ನಪ್ಪಿದ್ದು, ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್‌ ಸಂಬಂಧಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಮ್ರಾನ್ ಸಂಬಂಧಿಯನ್ನು ವಿಚಾರಿಸಲು ಕುಟುಂಬದವರ ಜತೆಗೆ ಆಸ್ಪತ್ರೆಗೆ ಆಗಮಿಸಿದ್ದ‌ ಅಯಾನ್ ಆಸ್ಪತ್ರೆ ಒಳಗಡೆಯಿಂದ ಆಟವಾಡುತ್ತ ಹೊರಗೆ ಬಂದು ತೊಟ್ಟಿಗೆ ಬಿದ್ದಿರಬಹುದೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತೊಟ್ಟಿಯ ಬಳಿ ತೆರಳಿದ್ದ ಮಗು ಭರ್ತಿ ನೀರಿದ್ದ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತೊಟ್ಟಿಗೆ ಮುಚ್ಚುಳ ಮುಚ್ಚದಿದ್ದ ಪರಿಣಾಮ ಆಟವಾಡುತ್ತ ಹೋದ ಹೋದ ಮಗು ತೊಟ್ಟಿಗೆ ಬಿದ್ದಿದ್ದೆ. ಆಸ್ಪತ್ರೆ ಸಿಬ್ಬಂದಿಯವರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರ ಆರೋಪ ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *