LATEST NEWS
ಮಹಾರಾಷ್ಟ್ರ – ಪಲ್ಟಿಯಾದ ಟಿಪ್ಪರ್ ಲಾರಿ 13ಕ್ಕೂ ಅಧಿಕ ಮಂದಿ ಸಾವು
ಮುಂಬೈ ಅಗಸ್ಟ್ 21: ಕೂಲಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಟಿಪ್ಪರ್ ಲಾರಿಯೊಂದು ಮುಗುಚಿ ಬಿದ್ದ ಪರಿಣಾಮ 13 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಂದಕಕ್ಕೆ ಉರುಳಿದೆ. ಈ ವೇಳೆ ಟ್ರಕ್ ನಲ್ಲಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲಾಗಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಜಲ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ ಟ್ರಕ್ ನಲ್ಲಿ ಸುಮಾರು 16 ಮಂದಿ ಪ್ರಯಾಣಿಕರು ಇದ್ದರು. ಎಲ್ಲರೂ ದಿನಗೂಲಿ ನೌಕರರಾಗಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಾವಿಗೀಡಾದವರ ಮೃತದೇಹಗಳನ್ನು ಕುಟುಂಬಸ್ಥರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ.
ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿದೆ ತಲಾ 2 ಲಕ್ಷ ರೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಗಳನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
You must be logged in to post a comment Login