Connect with us

KARNATAKA

ಮಂಡ್ಯ : ದೇವಸ್ಥಾನದ ಗೇಟ್ ಬಿದ್ದು ಬಾಲಕ ಮೃತ್ಯು..!

ಮಂಡ್ಯ :  ದೇವಸ್ಥಾನದ ಗೇಟ್‌ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ನಡೆದಿದೆ.  ಹೆಚ್.ಎಸ್.ಜಿಷ್ಣು (5) ಮೃತ ಪಟ್ಟ ಬಾಲಕನಾಗಿದ್ದಾನೆ.

ಕಾರ್ತಿಕ ಸೋಮವಾರದ ಹಿನ್ನೆಲೆ ಹುಂಜನಕೆರೆಯ ಚನ್ನಕೇಶವ ದೇಗುಲಕ್ಕೆ ಮಕ್ಕಳು ಕುಟುಂಬದವರ ಜೊತೆ ತೆರಳಿದ್ದ  ವೇಳೆ  ಈ ದುರ್ಘಟನೆ ಸಂಭವಿಸಿದೆ. ದೇವಸ್ಥಾನದ ಗೇಟ್‌ ಬಾಲಕನ ಮೇಲೆ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಜಿಷ್ಣುವನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಜರಾಯಿ ಇಲಾಖೆ ವಿರುದ್ಧ ಪೋಷಕರು, ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದು, ಗೇಟ್ ಮುರಿದು ಬಹಳ ದಿನಗಳಾದ್ರೂ ದುರಸ್ಥಿ ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *