LATEST NEWS
ವಿಧ್ಯಾರ್ಥಿನಿಗೆ ಕಾಲೇಜಿನಲ್ಲೇ ಚಾಕು ಇರಿದ ಕೊಲೆ ಮಾಡಿದ ಪಾಗಲ್ ಪ್ರೇಮಿ
ಬೆಂಗಳೂರು ಜನವರಿ 2 – ಎಂಜಿನಿಯರಿಂಗ ವಿಧ್ಯಾರ್ಥಿಯೊಬ್ಬ ಬಿ ಟೆಕ್ ವಿಧ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಘಟನೆ ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.
ನೃಪತುಂಗ ರಸ್ತೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಕೊಲೆ ಆರೋಪಿ. ಪ್ರೆಸಿಡೆನ್ಸಿ ಕಾಲೇಜಿನ ಲಯಸ್ಮಿತ (19) ಮೃತ ಯುವತಿ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದ್ರೆ ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
19 ವರ್ಷದ ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದಳು. ಇಂದು ಅಲ್ಲಿಗೆ ಬಂದಿದ್ದ ಸ್ಪರ್ಶ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ. ಆಕೆ ಬಂದ ಕೂಡಲೇ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಸ್ಥಳಕ್ಕಾಗಿಮಿಸಿರುವ ಪೊಲೀಸರು ಸ್ಪರ್ಶ್ನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
You must be logged in to post a comment Login