Connect with us

LATEST NEWS

ಕಾಲೇಜು ವಿದ್ಯಾರ್ಥಿನಿಗೆ ‘ಅಶ್ಲೀಲ ಮೆಸೇಜ್’ ಮಾಡಿ ಲೈಂಗಿಕ ಕಿರುಕುಳ: ಅನ್ಯ ಕೋಮಿನ ಯುವಕ ಅರೆಸ್ಟ್.!

ಮಂಗಳೂರು, ಏಪ್ರಿಲ್​ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ  ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್​​ ಎಂಬಾತನ ಕಾಮಕಾಂಡ ಬಯಲಾಗಿದೆ.

ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.

ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ವಾಲಿಬಾಲ್ ಆಟಗಾರ ಕೂಡ ಹೌದು. ಓರ್ವ ವಿದ್ಯಾರ್ಥಿನಿಗೆ ಸೈಯದ್ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಹಿಂದೂ ಸಂಘಟನೆ ಕಾರ್ಯಕರ್ತರು ಒಂದು ಕ್ಷಣ ಶಾಕ್​ ಆಗಿದ್ದಾರೆ. ಏಕೆಂದರೆ ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಕಂಡು ದಂಗಾಗಿದ್ದಾರೆ.

ಇತ್ತ ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್​​ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *