Connect with us

    KARNATAKA

    ಪೊಲೀಸರ ಮೇಲಿನ ಸಿಟ್ಟಿಗೆ ಹೊಯ್ಸಳ ವಾಹನಕ್ಕೇ ಬೆಂಕಿ ಇಟ್ಟ ಯುವಕ!

    ಬೆಂಗಳೂರು, ಜುಲೈ 25: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. 

    ಈ ಕುರಿತು ಸ್ವಯಂ ದೂರು ದಾಖಲಿಸಿಕೊಂಡ ಸಿಟಿ ಮಾರ್ಕೆಟ್ ಪೊಲೀಸರು, ಆರೋಪಿ ಧೀರಜ್ ಕುಮಾರ್ (19) ಎಂಬಾತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಟಿ ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಧೀರಜ್‌ ಕುಮಾರ್, ಪಾದಚಾರಿ ಮಾರ್ಗದಲ್ಲಿ ಮಲಗುತ್ತಿದ್ದ. ಇದರ ನಡುವೆ ಹೊಯ್ಸಳ ಸಿಬ್ಬಂದಿ, ಆರೋಪಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.

    ಹೀಗಾಗಿ ಪೊಲೀರ ಮೇಲೆ ಕೋಪಗೊಂಡ ಧೀರಜ್, ಸೋಮವಾರ ಮಧ್ಯಾಹ್ನ 12 ಗಂಟೆಯಲ್ಲಿ ಪೆಟ್ರೋಲ್ ತಂದು ಹೊಯ್ಸಳ ವಾಹನದ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ. ಆರೋಪಿ ಕೃತ್ಯದಿಂದ ಹೆದರಿದ ಅಕ್ಕಪಕ್ಕದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಬೆಂಕಿ ನಂದಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply