LATEST NEWS
ಉಚಿತ ಬಸ್ ಪಾಸ್ ಗೆ ಒತ್ತಾಯ – ಎಬಿವಿಪಿಯಿಂದ ಪ್ರತಿಭಟನೆ
ಉಚಿತ ಬಸ್ ಪಾಸ್ ಗೆ ಒತ್ತಾಯ – ಎಬಿವಿಪಿಯಿಂದ ಪ್ರತಿಭಟನೆ
ಪುತ್ತೂರು ಜುಲೈ 18: ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪುತ್ತೂರಿನ ನೆಹರೂ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದ ಹಿನ್ನಲೆಯಲ್ಲಿ ವಿಧ್ಯಾರ್ಥಿಗಳು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪೋಲೀಸರ ವಿರೋಧದ ನಡುವೆಯೇ ವಿಧ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
You must be logged in to post a comment Login