Connect with us

DAKSHINA KANNADA

ರಾಜ್ಯ ಸರಕಾರದ ವಿರುದ್ದ ಎಬಿವಿಪಿ ಪ್ರತಿಭಟನೆ

ಪುತ್ತೂರು ಸೆಪ್ಟೆಂಬರ್ 13: ರಾಜ್ಯದ ಕಾನೂನು ವಿಶ್ವ ವಿದ್ಯಾಲಯ ಸೇರಿದಂತೆ ಅನೇಕ ವಿ.ವಿ ಗಳಿಗೆ ಕುಲಪತಿಯನ್ನು ನೇಮಿಸದ ರಾಜ್ಯ ಸರಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು.

ಸಹಾಯಕ ಕಮಿಷನರ್ ಕಛೇರಿ ಮುಂಭಾಗದಲ್ಲಿ ಸೇರಿದ ವಿದ್ಯಾರ್ಥಿಗಳು, ರಾಜ್ಯದಲ್ಲಿ ಇರುವ ಎಲ್ಲಾ ವಿಶ್ವವಿದ್ಯಾಲಯ ಗಳಲ್ಲಿ ಖಾಯಂ ಉಪನ್ಯಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ರಾಜ್ಯದ ವಿಶ್ವ ವಿದ್ಯಾಲಯಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದ ಶಿಕ್ಷಣದ ಗುಣಮಟ್ಟ ಕ್ಷೀಣಿಸುವ ವಾತಾವರಣವೂ ನಿರ್ಮಾಣವಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು. ಅಲ್ಲದೆ ಈ ಸಮಸ್ಯೆಗಳಿಂದಾಗಿ ಪರೀಕ್ಷಾ ಫಲಿತಾಂಶ, ಮೌಲ್ಯಮಾಪನ ಹಾಗೂ ಮರು ಮೌಲ್ಯ ಮಾಪನ ವ್ಯವಸ್ಥೆಗೂ ತೊಂದರೆಯಾಗಿದೆ ಎಂದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *