Connect with us

    DAKSHINA KANNADA

    ರಾಜ್ಯ ಸರಕಾರದ ವಿರುದ್ದ ಎಬಿವಿಪಿ ಪ್ರತಿಭಟನೆ

    ಪುತ್ತೂರು ಸೆಪ್ಟೆಂಬರ್ 13: ರಾಜ್ಯದ ಕಾನೂನು ವಿಶ್ವ ವಿದ್ಯಾಲಯ ಸೇರಿದಂತೆ ಅನೇಕ ವಿ.ವಿ ಗಳಿಗೆ ಕುಲಪತಿಯನ್ನು ನೇಮಿಸದ ರಾಜ್ಯ ಸರಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು.

    ಸಹಾಯಕ ಕಮಿಷನರ್ ಕಛೇರಿ ಮುಂಭಾಗದಲ್ಲಿ ಸೇರಿದ ವಿದ್ಯಾರ್ಥಿಗಳು, ರಾಜ್ಯದಲ್ಲಿ ಇರುವ ಎಲ್ಲಾ ವಿಶ್ವವಿದ್ಯಾಲಯ ಗಳಲ್ಲಿ ಖಾಯಂ ಉಪನ್ಯಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

    ರಾಜ್ಯದ ವಿಶ್ವ ವಿದ್ಯಾಲಯಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದ ಶಿಕ್ಷಣದ ಗುಣಮಟ್ಟ ಕ್ಷೀಣಿಸುವ ವಾತಾವರಣವೂ ನಿರ್ಮಾಣವಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು. ಅಲ್ಲದೆ ಈ ಸಮಸ್ಯೆಗಳಿಂದಾಗಿ ಪರೀಕ್ಷಾ ಫಲಿತಾಂಶ, ಮೌಲ್ಯಮಾಪನ ಹಾಗೂ ಮರು ಮೌಲ್ಯ ಮಾಪನ ವ್ಯವಸ್ಥೆಗೂ ತೊಂದರೆಯಾಗಿದೆ ಎಂದರು.

     

    Share Information
    Advertisement
    Click to comment

    You must be logged in to post a comment Login

    Leave a Reply