Connect with us

DAKSHINA KANNADA

ಸೌಜನ್ಯ ಹೋರಾಟದ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ – ಎಬಿವಿಪಿ

Share Information

ಪುತ್ತೂರು ಸೆಪ್ಟೆಂಬರ್ 08: ವಿಧ್ಯಾರ್ಥಿವಿ ಸೌಜನ್ಯ ಕೊಲೆ ಅತ್ಯಾಚಾರ ಪ್ರಕರಣದ ಮರುತನಿಖೆಗ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಗಳು ಮುಂದುವರೆದಿದೆ. ಈಗಾಗಲೇ ಹಲವಾರು ಸಂಘಟನೆಗಳು ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಪ್ರತಿಭಟನೆ ಆರಂಭ ಮಾಡಿವೆ. ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿದೆ.


ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಸೌಜನ್ಯ ಕೊಲೆ ಪ್ರಕರಣ ನಡೆದು 11 ವರ್ಷ ಕಳೆದರೂ ಇಲ್ಲಿಯವರೆಗೆ ನ್ಯಾಯ ಸಿಗಲಿಲ್ಲ. ಪ್ರಕರಣದ ತನಿಖೆ ನಡೆಸಿದ ಸಿಬಿಐ ಕೂಡಾ ನೈಜ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದೆ. ಈ ಹಿನ್ನಲೆ ರಾಜ್ಯ ಸರಕಾರ ಕೂಡಲೇ ಈ ಪ್ರಕರಣವನ್ನು ಮರು ತನಿಖೆಗೆ‌ ಒಪ್ಪಿಸಬೇಕು ಎಂದು ಆಗ್ರಹಿಸಿದರು.


ಸೌಜನ್ಯ ಹೋರಾಟದ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ. ಕೆಲವು ಚಿಂತಕರು ಧಾರ್ಮಿಕ ಕೇಂದ್ರಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ . ಇಂಥ‌ ವ್ಯಕ್ತಿಗಳ ವಿರುದ್ಧವೂ ಸರಕಾರ ಕ್ರಮ ಕೈಗೊಳ್ಳುಬೇಕು ಎಂದು ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಆಶಿಷ್ ಕೊಯಿಲಾ ಒತ್ತಾಯಿಸಿದರು.


Share Information
Advertisement
Click to comment

You must be logged in to post a comment Login

Leave a Reply