Connect with us

    LATEST NEWS

    ಕಾಂಪೋಸ್ಟ್ ಪೈಪ್ ಖರೀದಿ ಹಣ ದುರುಪಯೋಗ: 6 ಗ್ರಾ.ಪಂ.ಗಳ ಮೇಲೆ ಎಸಿಬಿ ಕೇಸು ದಾಖಲು

    ಕಾಂಪೋಸ್ಟ್ ಪೈಪ್ ಖರೀದಿ ಹಣ ದುರುಪಯೋಗ: 6 ಗ್ರಾ.ಪಂ.ಗಳ ಮೇಲೆ ಎಸಿಬಿ ಕೇಸು ದಾಖಲು

    ಮಂಗಳೂರು ಮೇ 25 ; ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಹಣ ದುರುಪಯೋಗದ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 6 ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸ್ವಚ್ಛತಾ ಆಂದೋಲನದ ಜಿಲ್ಲಾ ನೋಡಲ್ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಕ್ಷಿಣ ಕನ್ನಡ ಜಿಲ್ಲಾ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ.

    ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತಿನಲ್ಲಿ 2015-16ನೇ ಸಾಲಿನಲ್ಲಿ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಹಣ ದುರುಪಯೋಗದ ಪ್ರಕರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸಂಧ್ಯಾ ರಾಮಚಂದ್ರ,  ನಿವೃತ್ತ ಪಂಚಾಯತ್ ಅಭಿವೃದ್ದಿ ಅಧಿಕಾರಿ ದಾಮೋದರ ಗೌಡ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಚತಾ ಅಂದೋಲನ ನೋಡಲ್ ಅಧಿಕಾರಿ ಆಗಿದ್ದ ರೋಹಿತ್ ಎ.ಆರ್. ಮೇಲೆ ಪ್ರಕರಣ ದಾಖಲಾಗಿರುತ್ತದೆ.

    ಸುಳ್ಯ ತಾಲೂಕು ಜಾಲ್ಸೂರು ಗ್ರಾಮ ಪಂಚಾಯತಿನಲ್ಲಿ 2015-16ನೇ ಸಾಲಿನಲ್ಲಿ ಆದ ದುರುಪಯೋಗದ ಪ್ರಕರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್. ನಾಯಕ್,  ಪಿಡಿಓ ಶೀನ. ಎ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಚತಾ ಅಂದೋಲನಾದ ನೋಡಲ್ ಅಧಿಕಾರಿ ಆಗಿದ್ದ ರೋಹಿತ್ ಎ.ಆರ್.  ಮೇಲೆ ಪ್ರಕರಣ ದಾಖಲಾಗಿರುತ್ತದೆ.

    ಪುತ್ತೂರು ತಾಲೂಕು ಆರ್ಯಾಪು ಗ್ರಾಮ ಪಂಚಾಯತಿನಲ್ಲಿ 2015-16ನೇ ಸಾಲಿನಲ್ಲಿ ಆದ ದುರುಪಯೋಗದ ಪ್ರಕರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಪಿಡಿಓ ಜಗದೀಶ್, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಚತಾ ಅಂದೋಲನ ನೋಡಲ್ ಅಧಿಕಾರಿ ಆಗಿದ್ದ ರೋಹಿತ್ ಎ.ಆರ್. ರವರ ಮೇಲೆ ಪ್ರಕರಣ ದಾಖಲಾಗಿರುತ್ತದೆ.

    ಪುತ್ತೂರು ತಾಲೂಕು ಬಿಳಿನೆಲೆ ಗ್ರಾಮ ಪಂಚಾಯತಿನಲ್ಲಿ 2015-16ನೇ ಸಾಲಿನಲ್ಲಿ ಆದ ದುರುಪಯೋಗದ ಪ್ರಕರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶಾರದಾ.ಟಿ, ಪಿ.ಡಿ.ಓ ಸರೋಜಾ, (ಹಾಲಿ: ಕನಕ ಮಜಲು ಗ್ರಾಮ ಪಂಚಾಯತ್), ಗ್ರಾ.ಪಂ. ಕಾರ್ಯದರ್ಶಿ ರಮೇಶ.ಪಿ (ಹಾಲಿ: ಮಂಡೆಕೋಲು ಗ್ರಾಮ ಪಂಚಾಯತ್) ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಚತಾ ಅಂದೋಲನದ ನೋಡಲ್ ಅಧಿಕಾರಿಯಾಗಿದ್ದ ರೋಹಿತ್ ಎ.ಆರ್.ರವರ ಮೇಲೆ ಪ್ರಕರಣ ದಾಖಲಾಗಿರುತ್ತದೆ.

    ಪುತ್ತೂರು ತಾಲೂಕು ಕೊೈಲ ಗ್ರಾಮ ಪಂಚಾಯತಿನಲ್ಲಿ 2015-16ನೇ ಸಾಲಿನಲ್ಲಿ ಆದ ದುರುಪಯೋಗದ ಪ್ರಕರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ. ಬಿ, ಪಿ.ಡಿ.ಓ. ಚಿತ್ರಾವತಿ, (ಹಾಲಿ: ಪಿಡಿಓ ಕೊೈಲ ಗ್ರಾಮ ಪಂಚಾಯತ್) ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಚತಾ ಅಂದೋಲನಾದ ನೋಡಲ್ ಅಧಿಕಾರಿ ಆಗಿದ್ದ ರೋಹಿತ್ ಎ.ಆರ್.ರವರ ಮೇಲೆ ಪ್ರಕರಣ ದಾಖಲಾಗಿರುತ್ತದೆ.

    ಪುತ್ತೂರು ತಾಲೂಕು ಪೆರಾಬೆ ಗ್ರಾಮ ಪಂಚಾಯತಿನಲ್ಲಿ 2015-16ನೇ ಸಾಲಿನಲ್ಲಿ ಆದ ದುರುಪಯೋಗದ ಪ್ರಕರಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಬೇಬಿ.ಸಿ ಪಾಟಾಳಿ, ಪಿ.ಡಿ.ಓ.  ಜಿ.ಡಿ ಲಲಿತಾ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಚತಾ ಅಂದೋಲನಾದ ನೋಡಲ್ ಅಧಿಕಾರಿ ಆಗಿದ್ದ ರೋಹಿತ್ ಎ.ಆರ್.ರವರ ಮೇಲೆ ಪ್ರಕರಣ ದಾಖಲಾಗಿರುತ್ತದೆ.

    ಈ ಎಲ್ಲಾ ಆರು  ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಆರಕ್ಷಕ ಅಧೀಕ್ಷಕಿ ಶ್ರುತಿ ಎನ್.ಎಸ್. ಮಾರ್ಗದರ್ಶನದಲ್ಲಿ, ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‍ಪಿ ಸುಧೀರ್ ಹೆಗಡೆರವರು ಪ್ರಕರಣ ದಾಖಲಿಸಿದ್ದು, ಪೊಲೀಸ್ ಇನ್ಸ್‍ಪೆಕ್ಟರ್ ಮೋಹನ್ ಕೊಟ್ಟಾರಿ ತನಿಖೆ ನಡೆಸಿರುತ್ತಾರೆ. ಈ ಹಿಂದಿನ ಪೊಲೀಸ್ ಇನ್ಸ್‍ಪೆಕ್ಟರ್ ಯೋಗೀಶ್ ಕುಮಾರ್ ಈ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಎಂದು ಎಸಿಬಿ ಪ್ರಕಟಣೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply