Connect with us

    DAKSHINA KANNADA

    ಕಡಬ – ಮೂವರು ದ್ವಿತಿಯ ಪಿಯುಸಿ ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ಹಾಕಿದ ಕಿರಾತಕ

    ಪುತ್ತೂರು ಮಾರ್ಚ್ 4: ಯುವಕನೊಬ್ಬ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ.


    ಆ್ಯಸಿಡ್ ದಾಳಿಗೆ ತುತ್ತಾದವರನ್ನು ವಿಧ್ಯಾರ್ಥಿನಿಯರಾದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದು. ಸರಕಾರಿ ಕಾಲೇಜು ಕಡಬದಲ್ಲಿ ಈ ಘಟನೆ ನಡೆದಿದೆ.
    ಆರೋಪಿ ಮಾಸ್ಕ್,ಹ್ಯಾಟ್ ಹಾಕಿ ಬಂದಿದ್ದು, ಶಾಲಾ ವರಾಂಡದಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಈ ಮೂವರ ಮೇಲೆ ಆ್ಯಸಿಡ್ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಭಿನ್ ಎಂದು   ಗುರುತಿಸಲಾಗಿದೆ.

    ಆರೋಪಿ ಕೇರಳದಾತ ಎಂಬುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ವಿದ್ಯಾರ್ಥಿನಿಯರನ್ನು ಕೂಡಲೇ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ವಿಧ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply