Connect with us

    LATEST NEWS

    ಮಂಗಳೂರು: ಕರ್ತವ್ಯ ನಿರತ ಎಎಸ್ ಐ ರಸ್ತೆ ಅಪಘಾತದಲ್ಲಿ ಸಾವು

    ಮಂಗಳೂರು ಮಾರ್ಚ್ 18: ಕರ್ತವ್ಯದ ವೇಳೆ ಬೈಕ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ಉಂಟಾದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.


    ಮೃತ ಪೊಲೀಸ್‌ ಅಧಿಕಾರಿಯನ್ನು ಸದಾಶಿವ(59) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಸಂಚಾರ ಪೂರ್ವ ಪೊಲೀಸ್ ಠಾಣಾ ಎ.ಎಸ್.ಐ ಆಗಿದ್ದ ಸದಾಶಿವ ಅವರು ಮಾ.14ರಂದು ರಾತ್ರಿ 9 ಗಂಟೆಯ ವೇಳೆ ಕರ್ತವ್ಯದ ನಿಮಿತ್ತ ಕೊಟ್ಟಾರ ಚೌಕಿ ಫ್ಲೈಓವರ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಪ್ರತಿಫಲಕ ಇಲ್ಲದ ರೋಡ್‌ ರೋಲರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮೃತ ಅಧಿಕಾರಿಯ ನಿಧನಕ್ಕೆ ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply