Connect with us

DAKSHINA KANNADA

ತಾಯಿ – ಮಗುವಿನ ಮೇಲೆ ಹರಿದ ಬಸ್..ಅಪಘಾತದ ಸಿಸಿಟಿವಿ ವಿಡಿಯೋ

ಉಪ್ಪಿನಂಗಡಿ ಅಕ್ಟೋಬರ್ 12: ಬಸ್ ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಅಡಿಗೆ ಬಿದ್ದು ತಾಯಿ ಹಾಗೂ ಒಂದು ವರ್ಷದ ಮಗು ಧಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.


ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (೨೫) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು.

 

ಈ ಸಂದರ್ಭ ಬಸ್ ನಿಲ್ದಾಣಕ್ಕೆ ತಿರುಗುವಲ್ಲೇ ಇರುವ ನಂದಿನಿ ಹಾಲಿನ ಬೂತಿನ ಎದುರಿನಿಂದ ಮತ್ತೊಂದು ಕಡೆಗೆ ಶಾಹಿದಾ ಮಗುವಿನೊಂದಿಗೆ ದಾಟಿದ್ದು, ಈ ಸಂದರ್ಭ ಯಮದೂತನಂತೆ ಅತಿ ವೇಗದಿಂದ ಬಸ್ನಿಲ್ದಾಣದೊಳಗೆ ಬಂದ ಬಸ್ ತಾಯಿ ಮಗುವನ್ನು ಆಹುತಿ ಪಡೆದಿದೆ. ಇವರಿಬ್ಬರ ತಲೆಯ ಮೇಲೆ ಬಸ್ ಹರಿದಿದ್ದು, ಇದರಿಂದ ತಾಯಿ- ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *