Connect with us

    LATEST NEWS

    ಮಂಗಳೂರು – ಅಪಘಾತದಲ್ಲಿ ಪತಿ ಸಾವಿನ ಸುದ್ದಿ ಕೇಳಿ…6 ತಿಂಗಳ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಶರಣು

    ಮಂಗಳೂರು ಎಪ್ರಿಲ್ 17: ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಸಾವನಪ್ಪಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ 6 ತಿಂಗಳ ಮಗುವನ್ನು ಕೊಂದು ಮೃತಯ ವ್ಯಕ್ತಿಯ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.


    ಗಂಗಾಧರ ಬಿ. ಕಮ್ಮಾರ (36 ವರ್ಷ) ಅಪಘಾತದಲ್ಲಿ ಮೃತಪಟ್ಟವರು. ಶನಿವಾರ ರಾತ್ರಿ 8.50 ಸುಮಾರಿಗೆ ಎನ್‌ಎಚ್-66 ರಲ್ಲಿ ಕುಂಟಿಕಾನ ಬಳಿ ರಸ್ತೆ ದಾಟುವಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ( XUV 500 ) ಡಿಕ್ಕಿ ಹೊಡೆದ ಪರಿಣಾಮ ಗಂಗಾಧರ ರವರು ಸ್ಥಳದಲ್ಲೇ ಮೃತಪಟ್ಟಿದ್ದರು.

    ಇತ್ತ ತನ್ನ ಪತಿ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ 6 ತಿಂಗಳ ಪುತ್ರ ಅಭಿರಾಮನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಶ್ರುತಿ ಅವರು ತಮ್ಮ ತಮ್ಮನ ಮನೆಯಲ್ಲಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply