Connect with us

    KARNATAKA

    ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ – 6 ಮಂದಿ ಸಾವು

    ಕುಷ್ಟಗಿ ಮೇ 28: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಭಾನುವಾರ ಸಂಜೆ ನಡೆದಿದೆ.


    ಮೃತಪಟ್ಟವರು ವಿಜಯಪುರ ಮೂಲದವರು ಎಂದು ಗೊತ್ತಾಗಿದೆ. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು, ಟಾಟಾ ಇಂಡಿಕಾ ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯ ಕೆಳಭಾಗದ ಒಳಗಡೆ ನುಗ್ಗಿದೆ.

    ಪೊಲೀಸರ ಮಾಹಿತಿ ಪ್ರಕಾರ ರಾಚಪ್ಪ ಬನಸೋಡೆ, ರಾಘವೇಂದ್ರ ಕಾಂಬಳೆ, ಅಕ್ಷಯ ಶಿವಶರಣ, ಜಯಶ್ರೀ ಕಾಂಬಳೆ, ರಾಕಿ, ರಶ್ಮಿಕಾ ಮೃತಪಟ್ಟವರು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಕ್ರೇನ್‌ ಮೂಲಕ ಹೊರ ತೆಗೆದು ಪಟ್ಟಣದ ಆಸ್ಪತ್ರೆಗೆ ಸಾಗಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply