DAKSHINA KANNADA
ಬೆಂಗಳೂರಿನ ನಡೆದ ಅಪಘಾತದಲ್ಲಿ ಕೊಲ್ಲಮೊಗ್ರ ನಿವಾಸಿ ಮೃತ್ಯು..!!
ಸುಳ್ಯ ಎಪ್ರಿಲ್ 25: ಕೊಲ್ಲಮೊಗ್ರ ನಿವಾಸಿ ಯುವಕನೊಬ್ಬ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು.
ಸೋಮವಾರ ಬೆಳಗ್ಗೆ ಯತೀಶ್ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು ತಂದೆ ತಾಯಿ, ಸಹೋದರ, ಸಹೋದರಿ, ಬಂಧುಮಿತ್ರರನ್ನು ಅಗಲಿದ್ದಾರೆ.
You must be logged in to post a comment Login