Connect with us

    DAKSHINA KANNADA

    ಪುತ್ತೂರು – ಮಗನನ್ನು ಬಸ್ ಗೆ ಬಿಡಲು ತೆರಳುತ್ತಿರುವಾಗ ಅಪಘಾತ – ತಂದೆ ಸಾವು…ಮಗನಿಗೆ ಗಂಭೀರ ಗಾಯ

    ಪುತ್ತೂರು, ಜುಲೈ4: ಮಗನನ್ನು ಬೆಂಗಳೂರು ಬಸ್ ಗೆ ಹತ್ತಿಸಲು ಹೋಗುವಾಗ ನಡೆದ ಅಪಘಾತದಲ್ಲಿ ಅಪ್ಪ ಸಾವನಪ್ಪಿದ್ದು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ.


    ಮೃತರನ್ನು ಕುಂಬ್ರ ಪಂಜಿಗುಡ್ಡೆ ನಿವಾಸಿ ರಘುನಾಥ ಶೆಟ್ಟಿ (55) ಮೃತಪಟ್ಟವರು. ಅವರ ಪುತ್ರ ಅನುಷ್ ಶೆಟ್ಟಿ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅನುಷ್ ಶೆಟ್ಟಿ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ತನ್ನ ಪುತ್ರನನ್ನು ಬೆಂಗಳೂರಿನ ಬಸ್ಸಿಗೆ ಬಿಡಲೆಂದು ಮನೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ತಿಂಗಳಾಡಿ ರಸ್ತೆಯ ಕುಂಬ್ರ ಸಮೀಪದಲ್ಲಿ ಮುಂಭಾಗದಿಂದ ಬರುತ್ತಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಮಾರುತಿ ಓಮ್ಮಿಗೆ ಬೈಕ್ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಇಬ್ಬರೂ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರಾದ ಚಲನಚಿತ್ರ ನಟ ಸುಂದರ ರೈ ಮಂದಾರ ತನ್ನ ಸ್ನೇಹಿತರ ಜೊತೆಗೆ ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ದಾರಿಮಧ್ಯೆ ರಘುರಾಮ ಶೆಟ್ಟಿ ಮೃತಪಟ್ಟಿದ್ದಾರೆ. ಕಾಲು ಮುರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ಅನುಷ್‌ ಶೆಟ್ಟಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply