Connect with us

    DAKSHINA KANNADA

    ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹಿರಿಯ ಆರ್ ಎಸ್ಎಸ್ ಕಾರ್ಯಕರ್ತ ಸಾವು

    ಪುತ್ತೂರು, ಡಿಸೆಂಬರ್ 15:  ಅಪರಿಚಿತ ವಾಹನವೊಂದು  ಬೈಕ್  ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಆರ್ ಎಸ್ಎಸ್ ಕಾರ್ಯಕರ್ತರೊಬ್ಬರು ಸಾವನಪ್ಪಿರುವ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ.


    ಮೃತರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಕಡಬ ಬಳಿಯ ಪೋಳ್ಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.  ಅಪಘಾತದ ತೀವೃತೆಗೆ ವೆಂಕಟ್ರಮಣ ಹೊಳ್ಳ ಅವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply