DAKSHINA KANNADA
ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹಿರಿಯ ಆರ್ ಎಸ್ಎಸ್ ಕಾರ್ಯಕರ್ತ ಸಾವು
ಪುತ್ತೂರು, ಡಿಸೆಂಬರ್ 15: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಆರ್ ಎಸ್ಎಸ್ ಕಾರ್ಯಕರ್ತರೊಬ್ಬರು ಸಾವನಪ್ಪಿರುವ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ.
ಮೃತರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಕಡಬ ಬಳಿಯ ಪೋಳ್ಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವೃತೆಗೆ ವೆಂಕಟ್ರಮಣ ಹೊಳ್ಳ ಅವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ನಮ್ಮೆಲ್ಲರ ಮಾರ್ಗದರ್ಶಕರು ಸಂಘದ ಹಿರಿಯರಾದ ಅಗ್ರಬೈಲು ಶ್ರೀ ವೆಂಕಟರಮಣ ಹೊಳ್ಳರು ಇಂದು ನಮ್ಮನ್ನಗಲಿದ್ದಾರೆ.
ಸಮಾಜ ಸಮರ್ಪಿತ ಜೀವನ ಅವರದ್ದು, ನೂರಾರು ಕಾರ್ಯಕರ್ತರಿಗೆ ಪ್ರೇರಣೆ ಅವರ ಜೀವನ.
ಅಗಲಿದ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ.
ಓಂ ಶಾಂತಿ pic.twitter.com/7gkExN73ay
— Rajesh Naik U (@URajeshNaik) December 15, 2020
You must be logged in to post a comment Login