DAKSHINA KANNADA
ವಿಟ್ಲ – ಪಾದಚಾರಿ ಪ್ರಾಣ ತೆಗೆದ ಲಾರಿ
ವಿಟ್ಲ ಜೂನ್ 10: ಪಾದಚಾರಿ ಮೇಲೆ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಮೃತರನ್ನು ಪೆರುವಾಯಿ ಗ್ರಾಮದ ಕಡಂಬು ನಿವಾಸಿ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು. ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಲಾರಿ ಕಲ್ಲಡ್ಕ – ಕಾಂಞಂಗಾಡ್ ರಸ್ತೆಯಲ್ಲಿ ಉಕ್ಕುಡ ಕಡೆಯಿಂದ ವಿಟ್ಲ ಕಡೆ ತೆರಳುತ್ತಿರುವ ವೇಳೆ ಅವಘಡ ಸಂಭವಿಸಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You must be logged in to post a comment Login