KARNATAKA
ಚಿತ್ರದುರ್ಗ – ಫಾರ್ಚುನರ್ ಕಾರು ಲಾರಿಗೆ ಡಿಕ್ಕಿ – ಮೂರು ತಿಂಗಳ ಮಗು ಸೇರಿ ಮೂವರ ಸಾವು
ಚಿತ್ರದುರ್ಗ ಜೂನ್ 12: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಸಂಭವಿಸಿದೆ.
ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ಸು ಬರುವಾಗ ಸೋಮವಾರ ಬೆಳಗ್ಗೆ 7.30ಕ್ಕೆ ಈ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಜಾಕೀರ್ ಅಹಮ್ಮದ್(60), ತಬಸ್ಸುಮ್(28) ಹಾಗೂ ಮೂರು ವರ್ಷದ ಮಗು ಹಯಾತ್ ಫಾತಿಮಾ ಮೃತಪಟ್ಟಿದ್ದಾರೆ. ನಾಜಿಯಾ, ಇಮ್ರಾನ್ ಖಾನ್, ಶೋಯೇಬ್ ಅಹ್ಮದ್, ತಬ್ರೀಜ್ ಅಹ್ಮದ್ ಹಾಗೂ ಸಬಾ ಇವರುಗಳಿಗೆ ತೀವ್ರ ಗಾಯಾಳುಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಸ್ಥಳದಲ್ಲಿಯೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.
You must be logged in to post a comment Login