Connect with us

    LATEST NEWS

    ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು ಮೂರು ಸಾವು

    ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು ಮೂರು ಸಾವು

    ಉತ್ತರಕನ್ನಡ ನವೆಂಬರ್ 13: ಉತ್ತರಕನ್ನಡ ಹೊನ್ನಾವರ ತಾಲೂಕಿನ ಆರೋಳಿ ಕ್ರಾಸ್​ ಬಳಿ ಕಾರು ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು ಏಳು ಜನರು ಗಂಭೀರ ಗಾಯಗೊಂಡಿದ್ದಾರೆ . ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.

    ಮೃತರನ್ನು ಫಾತಿಮಾ (65). ರುಬಿಯಾ (45), ಚಾಬುಸಾಬ್​ ಎಂದು ಗುರುತ್ತಿಸಲಾಗಿದೆ. ಉಳಿದಂತೆ ಇತರ ಏಳು ಜನ ಗಾಯಗೊಂಡಿದ್ದಾರೆ. ಇವರನ್ನೆಲ್ಲ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದವರು ಎಂದು ತಿಳಿದುಬಂದಿದೆ.

    ಗೋವಾದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್​ ಊರಿಗೆ ಮರಳುತಿದ್ದಾಗ ಈ ವೇಳೆ ದುರ್ಘಟನೆ ಸಂಭವಿಸಿದೆ ಗಾಯಗೊಂಡವರನ್ನು ಹೊನ್ನಾವರ ಆಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply