Connect with us

    LATEST NEWS

    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೋಟೋಗ್ರಾಫರ್ ಹೇರೂರು ಅಶೋಕ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಸಾವು

    ಕುಂದಾಪುರ ಜುಲೈ 6: ಮದುವೆ ಸಮಾರಂಭ ಮುಗಿಸಿ ಕಾರಿನಲ್ಲಿ ವಾಪಾಸ್ ಬರುತ್ತಿದ್ದ ಸಂದರ್ಭ ತಾವರೆಕೆರೆ ಹೆದ್ದಾರಿಯಲ್ಲಿ ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು.


    ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ ಪನ್ನಗ ಶೆಟ್ಟಿ ಹಾಗೂ ಇನ್ನೋರ್ವ ಛಾಯಾಗ್ರಾಹಕ ಕುಮಾರ್ ಜೊತೆ ಮನೆಗೆ ಬರುತ್ತಿರುವ ವೇಳೆಯಲ್ಲಿ ಸೋಮವಾರ ನಸುಕಿ‌ನ ಜಾವ ಈ ಅವಘಡ ನಡೆದಿತ್ತು. ಕಾರು ತಮಕೂರು ಸಮೀಪದ ತಾವರೆಕೆರೆ ಸಮೀಪಿಸುತ್ತಿದ್ದಂತೆಯೇ ಎದುರುಗಡೆಯಿಂದ ಸಾಗುತ್ತಿರುವ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ಪನ್ನಗ ಶೆಟ್ಟಿ ಹಾಗೂ ಮುಂದೆ ಕುಳಿತಿದ್ದ ಅಶೋಕ್ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿತ್ತು. ಕಾರಿನ ಹಿಂಬದಿ ಕುಳಿತಿದ್ದ ಇನ್ನೋರ್ವ ಛಾಯಾಗ್ರಾಹಕ ಕುಮಾರ್ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ‌ ಪಾರಾಗಿದ್ದರು.


    ಗಂಭೀರ ಗಾಯಗೊಂಡ ಅಶೋಕ್ ಶೆಟ್ಟಿಯವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಭಾಗಕ್ಕೆ ಬಲವಾದ ಪೆಟ್ಟು ತಗುಲಿದ್ದರಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಪುತ್ರ ಪನ್ನಗ ಶೆಟ್ಟಿಯವರನ್ನು‌ ಸೋಮವಾರವೇ ಹೆಚ್ಚಿನ‌ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ, ಚಿಕಿತ್ಸೆ ನೀಡಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply