Connect with us

    LATEST NEWS

    ಸ್ಕೂಟರ್ ಗೆ ಲಾರಿ ಡಿಕ್ಕಿ ಸ್ಕೂಟರ್ ಸವಾರ ಸುಶಿಕ್ಷಿತ್ ಸಾವು..ಸಹಾಯಕ್ಕಾಗಿ ಅಂಗಲಾಚಿದ ಗಳೆಯರು…!!

    ಉಡುಪಿ ಡಿಸೆಂಬರ್ 03: ನಿನ್ನೆ ಕಟಪಾಡಿ ಜಂಕ್ಷನ್ ನಲ್ಲಿ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು ಜನ ಜನ ಯಾವುದೇ ಸಹಾಯ ಮಾಡದೇ ನೋಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ಕೊಂಡೊಯ್ಯು ವಂತೆ ಸಾರ್ವಜನಿಕರ ಎದುರು ಆತನ ಸ್ನೇಹಿತರು ಗೋಗೆರದ ವಿಡಿಯೋ ಇದೀಗ ವೈರಲ್ ಆಗಿದೆ.


    ನಿನ್ನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಈ ಅಪಘಾತ ನಡೆದಿದ್ದು, ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸವಾರ ಸುಶಿಕ್ಷಿತ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು, ಆದರೆ ಅಪಘಾತ ನಡೆದ ಸಂದರ್ಭ ಸ್ಥಳದಲ್ಲಿ ನೆರೆದಿದ್ದ ಜನರು ಸಹಾಯ ಮಾಡುವ ಬದಲು ದೂರವೇ ನಿಂತು ಎಲ್ಲವನ್ನು ಮೌನವಾಗಿ ನೋಡುತ್ತಿದ್ದರು. ಗಾಯಾಳನ್ನು ಕೊಂಡೊಯ್ಯವಂತೆ ಆತನ ಸ್ನೇಹಿತರು ಗೋಗರೆದಿದ್ದು, ರಿಕ್ಷಾ ಆದ್ರೂ ಕರೆ ತನ್ನಿ ಅಂದ್ರೂ, ಜನರ ನಿಂತೆ ಇದ್ದರು, ಕೊನೆಗೆ ಕಾಡಿ ಬೇಡಿ ಆಟೋದಲ್ಲಿ ಗೆಳೆಯನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಗೆಳೆಯನ್ನು ಹಿಡಿದು ಆಕ್ರಂದಿಸುವ ಗೆಳೆಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಶಿಕ್ಷಿತ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ.


    ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಬರುವವರೆಗೂ ಗಾಯಾಳು ಅಲ್ಲೇ ನೋವಿನಿಂದ ನರಳಾಡುತ್ತಿದ್ದ ಎನ್ನಲಾಗಿದ್ದು, ಬಳಿಕ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆಯಲ್ಲಿ ಬಿದ್ದು ಗಾಯಗೊಂಡ ಸ್ನೇಹಿತನನ್ನು ಆಸ್ಪತ್ರೆಗೆ ದಾಖಲಿಸಲು ಬನ್ನಿ ಎಂದು ಯುವಕರು ಚೀರಿ ಅಳುತ್ತಿದ್ದ ದೃಶ್ಯ ಎಂಥವರ ಮನಸ್ಸನ್ನೂ ಕರಗಿಸುವಂತಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply