Connect with us

    LATEST NEWS

    ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿ ಸಾವು….!!

    ಮಂಗಳೂರು ಡಿಸೆಂಬರ್ 28: ಆವರಣ ಇಲ್ಲದ ಬಾವಿಗೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ಡಿಸೆಂಬರ್ 27 ರಂದು ನಡೆದಿದೆ.


    ಮೃತರನ್ನು ಪದ್ಮನಾಭ ಬೆಲ್ಚಡ (51) ಎಂದು ಗುರುತಿಸಲಾಗಿದ್ದು, ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪದ್ಮನಾಭ ಬಜ್ಪೆಯಲ್ಲಿ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ಆ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ಮನೆಯಲ್ಲೇ ಇದ್ದರು. ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮನೆ ಸಮೀಪದ ಬಾವಿ ಬಳಿ ತೆರಳಿದಾಗ ಆಕಸ್ಮಿಕವಾಗಿ ಬಿದ್ದು ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply