Connect with us

BELTHANGADI

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ ಏಪ್ರಿಲ್ 07: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಗೆ ಯುವಕನೊಬ್ಬ ಪೊಲೀಸ್ ಭದ್ರತೆಯಲ್ಲಿ ಮುತ್ತಿಟ್ಟ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್​ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.


ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್​ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್​ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿದರು. ಈ ವೇಲೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *