BELTHANGADI
ಕಡಬ ವಿದ್ಯಾರ್ಥಿನಿಯರ ಮೇಲೆ ಆಸ್ಯಿಡ್ ದಾಳಿ : ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ, ಭಾಗಿರಥಿ ಮುರುಳ್ಯ…!
ಮಂಗಳೂರು : ದಕ್ಷಿಣ ಕನ್ನಡದ ಕಡಬ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಅವರು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಆಸ್ಯಿಡ್ ದಾಳಿಯಿಂದ ಮೂವರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು ಒಬ್ಬಾಕೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಆದ್ರೆ ಪ್ರಾಣಾಪಾಯದಿಂದ ಪಾರಾಗಿ ಇದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆರೋಪಿ ಈಗಾಗಲೇ ಪೊಲೀಸ್ ವಶದಲ್ಲಿದ್ದು ತನಿಖೆ ಮುಂದುವರೆದಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login